2025-26ನೇ ಸಾಲಿಗೆ ಅಲ್ಪಸಂಖ್ಯಾತರ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಇದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು **ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿಬಿಎಸ್ಇ, ಆಂಗ್ಲ ಮಾಧ್ಯಮ)**ಗಳ 6ನೇ ತರಗತಿಗೆ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅರ್ಹ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ( https://sevasindhuservices.karnataka.gov.in ) ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 10.
ಸೀಟು ವಿಂಗಡಣೆ:
- ಅಲ್ಪಸಂಖ್ಯಾತ ಸಮುದಾಯದ (ಸಿಖ್, ಬೌದ್ಧ, ಜೈನ್, ಕ್ರಿಶ್ಚಿಯನ್, ಮುಸ್ಲಿಂ, ಪಾರ್ಸಿ) ವಿದ್ಯಾರ್ಥಿಗಳಿಗೆ – 75%
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ – 25%
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸೌಲಭ್ಯಗಳು:
- ಉಚಿತ ವಸತಿ ಹಾಗೂ ಊಟ
- ವರ್ಷಕ್ಕೆ ಉಚಿತ ಸಮವಸ್ತ್ರ, ಬೂಟು, ಕಾಲು ಚೀಲ ಪೂರೈಕೆ
- ಪಠ್ಯಪುಸ್ತಕಗಳು ಹಾಗೂ ಲೇಖನ ಸಾಮಗ್ರಿ ವಿತರಣಾ
- ಪ್ರತಿ ಬಾಲಕ ವಿದ್ಯಾರ್ಥಿಗೆ ಎರಡು ತಿಂಗಳಿಗೊಮ್ಮೆ ಕ್ಷೌರದ ವ್ಯವಸ್ಥೆ
- ಟೂತ್ಪೇಸ್ಟ್, ಸೋಪ್, ಬ್ರಷ್, ಎಣ್ಣೆ ಒಳಗೊಂಡ ಸೋಪ್ ಕಿಟ್ ವಿತರಣೆ
- ವೈದ್ಯಕೀಯ ಸೌಲಭ್ಯ, ಹಾಸಿಗೆ, ಹೊದಿಕೆ, ಟ್ರಂಕ್, ಮಂಚ ಒದಗಿಕೆ
- ಪ್ರಯೋಗಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಗ್ರಿ ಹಾಗೂ ಗ್ರಂಥಾಲಯ ಸೌಲಭ್ಯ
Read More Jobs News/ ಇನ್ನಷ್ಟು ಜಾಬ್ಸ್ ಸುದ್ದಿ ಓದಿ:
South East Central Railway (SECR) ದಕ್ಷಿಣ ಪೂರ್ವ ಮಧ್ಯ ರೈಲ್ವೆನಲ್ಲಿ ನೇಮಕಾತಿ: 1003 ಅಪ್ರೆಂಟಿಸ್ ಹುದ್ದೆಗಳ ಭರ್ತಿ

PDF file click Here: Click
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:
📌 ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ (ಖ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ) – 7676473767
📌 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ಅರ್ಜಿ ಗ್ರಾಮ, ಪೆರಂಬಾಡಿ, ವಿರಾಜಪೇಟೆ) – 8105409405
📌 ತಾಲ್ಲೂಕು ಮಾಹಿತಿ ಕೇಂದ್ರ, ಸೋಮವಾರಪೇಟೆ – 8548068519
📌 ತಾಲ್ಲೂಕು ಮಾಹಿತಿ ಕೇಂದ್ರ, ವಿರಾಜಪೇಟೆ – 9900731037
ಅರ್ಹ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀ.ಆರ್.ಕೃಷ್ಣಮೂರ್ತಿ ಅವರು ಕೋರಿದ್ದಾರೆ.
ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ತಮ್ಮ ಅರ್ಹತೆ ಮತ್ತು ಅಗತ್ಯಗಳನ್ನು ಪರಿಶೀಲಿಸಿ, ನಂತರವೇ ಅರ್ಜಿ ಸಲ್ಲಿಸಲು ಮುಂದಾಗಬೇಕು.ನಿಮ್ಮ ಅಭಿಪ್ರಾಯವೇನು? ಕಾಮೆಂಟ್ ಮಾಡಿ ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ!
ಶ್ವೇತಾ ಗುಂಡಿಜಾಲು ಕಳೆದ ಒಂದು ವರ್ಷದಿಂದ ಕನ್ನಡದಲ್ಲಿ ಸುದ್ದಿ ಲೇಖನಗಳನ್ನು ಬರೆಯುತ್ತಿರುವ ಅನುಭವಿಯಾದ ಡಿಜಿಟಲ್ ನ್ಯೂಸ್ ರೈಟರ್ ಮತ್ತು ಬ್ಲಾಗರ್. ಸರ್ಕಾರದ ಯೋಜನೆಗಳು, ಕೇಂದ್ರ ಹಾಗೂ ಕರ್ನಾಟಕ ಸರ್ಕಾರದ ಉದ್ಯೋಗ ಪ್ರಕಟಣೆಗಳು, ವಿದ್ಯಾರ್ಥಿವೇತನ ಮಾಹಿತಿ ಹಾಗೂ ಶಿಕ್ಷಣದ ಕ್ಷೇತ್ರದ ಪ್ರಮುಖ ಮಾಹಿತಿಗಳನ್ನು ನಿರಂತರವಾಗಿ ಕನ್ನಡ ಓದುಗರಿಗೆ ತಲುಪಿಸುತ್ತಿದ್ದಾರೆ.
ಇವರ ಲೇಖನಗಳಲ್ಲಿ ಕ್ರೀಡೆ, ತಂತ್ರಜ್ಞಾನ, ಮನರಂಜನೆ, ರಾಜಕೀಯ ಮತ್ತು ದಿನನಿತ್ಯದ ಟ್ರೆಂಡಿಂಗ್ ಸುದ್ದಿಗಳಿಗೆ ವಿಶೇಷ ಪ್ರಾಧಾನ್ಯತೆ ಇದೆ. ಸರಳ ಭಾಷೆ, ನಿಖರ ಮಾಹಿತಿ ಮತ್ತು ವಿಶ್ವಾಸಾರ್ಹ ಬರವಣಿಗೆಯ ಮೂಲಕ ಓದುಗರ ಮನಸ್ಸಿನಲ್ಲಿ ನಂಬಿಕೆ ಗಳಿಸಿದ್ದಾರೆ.