ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಮೈಸೂರು – ಕಾರವಾರ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆ ಇಲ್ಲಿದೆ ಅದರ ಕಂಪ್ಲೀಟ್ ಡೀಟೇಲ್ಸ್
ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿಹೊಂದಿಸುವ ಸಲುವಾಗಿ ಮೈಸೂರು – ಕಾರವಾರ ನಡುವಿನ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ವಿಶೇಷ ರೈಲು ಮಾರ್ಚ್ 28ರಂದು ಮೈಸೂರು ನಿಲ್ದಾಣದಿಂದ ಪ್ರಾರಂಭವಾಗಲಿದೆ.

ರೈಲು ವೇಳಾಪಟ್ಟಿ:
➡️ ಮಾರ್ಚ್ 28, ರಾತ್ರಿ 9.35 – ಮೈಸೂರು ನಿಲ್ದಾಣದಿಂದ ಹೊರಡಲಿದೆ
➡️ ಮಾರ್ಚ್ 29, ಸಂಜೆ 4.15 – ಕಾರವಾರ ತಲುಪಲಿದೆ
➡️ ಮಾರ್ಚ್ 29, ರಾತ್ರಿ 11.30 – ಕಾರವಾರದಿಂದ ಮರಳಿ ಹೊರಡಲಿದೆ
➡️ ಮಾರ್ಚ್ 30, ಸಂಜೆ 4.40 – ಮೈಸೂರು ತಲುಪಲಿದೆ
ನಿಲುಗಡೆ ನಿಲ್ದಾಣಗಳು:
ಮಂಡ್ಯ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ಕುಣಿಗಲ್, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರಸ್ತೆ, ಅಂಕೋಲಾ ಈ ವಿಶೇಷ ರೈಲು 21 ಬೋಗಿಗಳೊಂದಿಗೆ ಕಾರ್ಯಾಚರಿಸಲಿದೆ, ಎಂದು ನೈರುತ್ಯ ರೈಲ್ವೆ ಇಲಾಖೆ ತಿಳಿಸಿದೆ. ಹಬ್ಬದ ಸಮಯದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವ ಈ ತಾತ್ಕಾಲಿಕ ಸೇವೆಗೆ ಹೆಚ್ಚಿನ ಪ್ರಯಾಣಿಕರು ಸ್ಪಂದಿಸುವ ನಿರೀಕ್ಷೆಯಿದೆ.
Read More/ ಇನ್ನಷ್ಟು ಸುದ್ದಿ ಓದಿ:
ಕರ್ನಾಟಕದಲ್ಲಿ ಹೀಟ್ ವೇವ್ (Heat Wave) ಎಚ್ಚರಿಕೆ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
ಟಿಕೆಟ್ ಬುಕ್ಕಿಂಗ್ ಮತ್ತು ಹೆಚ್ಚಿನ ಮಾಹಿತಿ:
ಪ್ರಯಾಣಿಕರು ಈ ವಿಶೇಷ ರೈಲಿನ ಟಿಕೆಟ್ಗಳನ್ನು IRCTC ವೆಬ್ಸೈಟ್ (www.irctc.co.in) ಅಥವಾ ನಿಕಟದ ರೈಲ್ವೆ ನಿಲ್ದಾಣಗಳಲ್ಲಿ ಲಭ್ಯವಿರುವ PRS ಕೌಂಟರ್ ಮೂಲಕ ಬುಕ್ ಮಾಡಬಹುದು. ರೈಲ್ವೆ ಇಲಾಖೆಯು ಈ ವಿಶೇಷ ರೈಲು ಸಂಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಬದಲಾವಣೆಗಳನ್ನು ತನ್ನ ಅಧಿಕೃತ ವೆಬ್ಸೈಟ್ ಹಾಗೂ ಸಾರ್ವಜನಿಕ ಪ್ರಕಟಣೆಗಳ ಮೂಲಕ ಪ್ರಕಟಿಸಲಿದೆ.ಹಬ್ಬದ ಪ್ರಯಾಣವನ್ನು ಸುಗಮಗೊಳಿಸಲು ಈ ವಿಶೇಷ ರೈಲು ಸೇವೆಯನ್ನು ಪ್ರಯಾಣಿಕರು ಉತ್ತಮವಾಗಿ ಬಳಸಿಕೊಳ್ಳಬಹುದಾಗಿದೆ.
ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ಹಂಚಿಕೊಳ್ಳಿ! ನಿಮ್ಮ www.quicknewztoday.com ವೆಬ್ಸೈಟ್ನಲ್ಲಿ ಇತ್ತೀಚಿನ ಸುದ್ದಿಗಳನ್ನು ನೋಡಿ.
ಶ್ವೇತಾ ಗುಂಡಿಜಾಲು ಕಳೆದ ಒಂದು ವರ್ಷದಿಂದ ಕನ್ನಡದಲ್ಲಿ ಸುದ್ದಿ ಲೇಖನಗಳನ್ನು ಬರೆಯುತ್ತಿರುವ ಅನುಭವಿಯಾದ ಡಿಜಿಟಲ್ ನ್ಯೂಸ್ ರೈಟರ್ ಮತ್ತು ಬ್ಲಾಗರ್. ಸರ್ಕಾರದ ಯೋಜನೆಗಳು, ಕೇಂದ್ರ ಹಾಗೂ ಕರ್ನಾಟಕ ಸರ್ಕಾರದ ಉದ್ಯೋಗ ಪ್ರಕಟಣೆಗಳು, ವಿದ್ಯಾರ್ಥಿವೇತನ ಮಾಹಿತಿ ಹಾಗೂ ಶಿಕ್ಷಣದ ಕ್ಷೇತ್ರದ ಪ್ರಮುಖ ಮಾಹಿತಿಗಳನ್ನು ನಿರಂತರವಾಗಿ ಕನ್ನಡ ಓದುಗರಿಗೆ ತಲುಪಿಸುತ್ತಿದ್ದಾರೆ.
ಇವರ ಲೇಖನಗಳಲ್ಲಿ ಕ್ರೀಡೆ, ತಂತ್ರಜ್ಞಾನ, ಮನರಂಜನೆ, ರಾಜಕೀಯ ಮತ್ತು ದಿನನಿತ್ಯದ ಟ್ರೆಂಡಿಂಗ್ ಸುದ್ದಿಗಳಿಗೆ ವಿಶೇಷ ಪ್ರಾಧಾನ್ಯತೆ ಇದೆ. ಸರಳ ಭಾಷೆ, ನಿಖರ ಮಾಹಿತಿ ಮತ್ತು ವಿಶ್ವಾಸಾರ್ಹ ಬರವಣಿಗೆಯ ಮೂಲಕ ಓದುಗರ ಮನಸ್ಸಿನಲ್ಲಿ ನಂಬಿಕೆ ಗಳಿಸಿದ್ದಾರೆ.